ಉಸಿರಾಟದ ತೊಂದರೆ :ನಟ ಅಂಬರೀಶ್ ತೀರ್ವ ನಿಗಾ ಘಟಕಕ್ಕೆ ದಾಖಲು
ಉಸಿರಾಟದ ಸಮಸ್ಯೆಯಿಂದಾಗಿ ನಟ ಅಂಬರೀಶ್ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ
ಬೆಂಗಳೂರು(ಜು.20): ಉಸಿರಾಟದ ಸಮಸ್ಯೆಯಿಂದಾಗಿ ನಟ,ಶಾಸಕ ಅಂಬರೀಶ್ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯ ತೀರ್ವ ನಿಗಾ ಘಟಕದಲ್ಲಿ ಚಿಕಿತ್ಸೆ ನಿಡಲಾಗುತ್ತಿದೆ. ಎರಡು ದಿನಗಳ ಹಿಂದಷ್ಟೆ ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ಆರೋಗ್ಯದ ಸಮಸ್ಯೆಯಿದ್ದ ಕಾರಣ ಅಂಬರೀಶ್ ವಿಧಾನಸೌಧಕ್ಕೆ ವ್ಹೀಲ್'ಚೇರ್ ಮೇಲೆ ಆಗಮಿಸಿ ಮತದಾನ ಮಾಡಿದ್ದರು. 2 ವರ್ಷಗಳ ಹಿಂದಷ್ಟೆ ಸಚಿವರಾಗಿದ್ದ ಸಂದರ್ಭದಲ್ಲಿ ಇದೇ ರೀತಿ ಆರೋಗ್ಯ ಸಮಸ್ಯೆ ಉಂಟಾಗಿ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು