Asianet Suvarna News Asianet Suvarna News

ಗಂಗಾವತಿ: ಹನುಮ ಜಯಂತಿ, ಅಂಜನಾದ್ರಿ ಬೆಟ್ಟಕ್ಕೆ ಹರಿದು ಬಂದ ಭಕ್ತ ಸಾಗರ..!

ಇಂದು ಬೆಳಿಗ್ಗೆ 4 ಗಂಟೆಯಿಂದಲೇ ಭಕ್ತರು ಅಂಜನಾದ್ರಿ ಬೆಟ್ಟವನ್ನ ಏರಿದ್ದಾರೆ.  ಹನುಮ ಜಯಂತಿ ಪ್ರಯುಕ್ತ ಆಂಜನೇಯಸ್ವಾಮಿಗೆ ವಿಶೇಷ ಎಲೆ ಅಲಂಕಾರ ಮಾಡಲಾಗಿತ್ತು. ಹೋಮ, ಹವನ ಸೇರೀದಂತೆ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. 

Devotees Visited to Anjanadri Hill on The Day of Hanuma Jayanti at Gangavathi in Koppal grg
Author
First Published Apr 23, 2024, 8:19 PM IST

ಗಂಗಾವತಿ(ಏ.23):  ಹನುಮ ಜಯಂತಿ ಆಚರಣೆ ಹಿನ್ನಲೆಯಲ್ಲಿ ಇಂದು(ಮಂಗಳವಾರ) ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಭಕ್ತರ ದಂಡೇ ಹರಿದು ಬಂದಿದೆ. 

ಇಂದು ಬೆಳಿಗ್ಗೆ 4 ಗಂಟೆಯಿಂದಲೇ ಭಕ್ತರು ಅಂಜನಾದ್ರಿ ಬೆಟ್ಟವನ್ನ ಏರಿದ್ದಾರೆ.  ಹನುಮ ಜಯಂತಿ ಪ್ರಯುಕ್ತ ಆಂಜನೇಯಸ್ವಾಮಿಗೆ ವಿಶೇಷ ಎಲೆ ಅಲಂಕಾರ ಮಾಡಲಾಗಿತ್ತು. ಹೋಮ, ಹವನ ಸೇರೀದಂತೆ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. 

ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ; ಅಂಜನಾದ್ರಿಯಲ್ಲಿ ಮೆಟ್ಟಿಲು ದೀಪೋತ್ಸವಕ್ಕೆ ರೆಡ್ಡಿ ದಂಪತಿ ಚಾಲನೆ

ನಾಡಿನ ವಿವಿಧ ಜಿಲ್ಲೆಗಳಿಂದ ಅಂಜನಾದ್ರಿ ಬೆಟ್ಟಕ್ಕೆ ಭಕ್ತರು ಆಗಮಿಸಿದ್ದರು. ಸುಡು ಬಿಸಿಲನ್ನು ಲೆಕ್ಕಿಸದೇ ಭಕ್ತರು ಪಾದಯಾತ್ರೆ ಮೂಲಕ ಆಗಮಿಸಿ ತಮ್ಮ ಭಕ್ತಿ ಸಮರ್ಪಿಸಿದ್ದಾರೆ. ಅಂಜನಾದ್ರಿ ಬೆಟ್ಟಕ್ಕೆ ಆಗಮಿಸಿದ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಗಿದೆ. 

Follow Us:
Download App:
  • android
  • ios