ಕರ್ತವ್ಯಲೋಪವೆಸಗಿದ್ದ 805 ವೈದ್ಯರು ಸಸ್ಪೆಂಡ್
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ರಮೇಶ್ ಕುಮಾರ್, ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆ, ವಿದೇಶಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೇ, ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು ಒಂದು ಸಾವಿರ ದಿನಗಳಿಂದ ಗೈರು ಹಾಜರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸುಮಾರು 805 ವೈದ್ಯರ ವಜಾ ಮಾಡಲಾಗಿದೆ ಎಂದು ಹೇಳಿದರು.
ಬೆಂಗಳೂರು(ಅ.27): ಸರ್ಕಾರಿ ಕೆಲಸ ದೇವರ ಕೆಲಸ ಅಂತಾರೆ. ಆದರೆ, ಅದೇ ಸರ್ಕಾರಿ ಕೆಲಸಲ್ಲಿದ್ದುಕೊಂಡೇ ಚಕ್ಕರ್ ಹಾಕುತ್ತಿದ್ದ ವೈದ್ಯರಿಗೆ ಆರೋಗ್ಯ ಸಚಿವ ರಮೇಶ್ ಕುಮಾರ್ ಬಿಸಿ ಮುಟ್ಟಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞರು, ವೈದ್ಯರ ಕೊರತೆ ಹಿನ್ನಲೆಯಲ್ಲಿ ಸತತ ಒಂದು ಸಾವಿರ ದಿನಗಳಿಂದ ಗೈರು ಹಾಜರಾಗಿದ್ದ 805 ವೈದ್ಯರನ್ನು ಸಸ್ಪೆಂಡ್ ಮಾಡಲಾಗಿದೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ರಮೇಶ್ ಕುಮಾರ್, ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆ, ವಿದೇಶಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೇ, ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು ಒಂದು ಸಾವಿರ ದಿನಗಳಿಂದ ಗೈರು ಹಾಜರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸುಮಾರು 805 ವೈದ್ಯರ ವಜಾ ಮಾಡಲಾಗಿದೆ ಎಂದು ಹೇಳಿದರು.