ವಿನಯ್ ಕಿಡ್ನಾಪ್ ಯತ್ನ ಪ್ರಕರಣ: ತಲೆ ಮರೆಸಿಕೊಂಡಿದ್ದ ಮತ್ತೊಬ್ಬ ಪ್ರಮುಖ ಆರೋಪಿ ಬಂಧನ
ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ವಿನಯ್ ಕಿಡ್ನಾಪ್ ಯತ್ನ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಮತ್ತೊಬ್ಬ ಪ್ರಮುಖ ಆರೋಪಿ ಉಮಾಕಾಂತ್ನನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು(ಆ.20): ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ವಿನಯ್ ಕಿಡ್ನಾಪ್ ಯತ್ನ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಮತ್ತೊಬ್ಬ ಪ್ರಮುಖ ಆರೋಪಿ ಉಮಾಕಾಂತ್ನನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.
ರೌಡಿಶೀಟರ್ ಪ್ರಶಾಂತ್'ನ ಬಂಟ ಉಮಾಕಾಂತ್, ಯಡಿಯೂರಪ್ಪ ಪಿಎ ಸಂತೋಷ ಜತೆ ಸಂಪರ್ಕದಲ್ಲಿದ್ದ. ಯಡಿಯೂರಪ್ಪ ನಿವಾಸದ ಡಾಲರ್ಸ್ ಕಾಲೋನಿಯಲ್ಲಿ ಸಂತೋಷ್ ಹಾಗೂ ಉಮಾಕಾಂತ್ ಭೇಟಿಯಾಗಿದ್ದರು. ಈ ಹಿಂದೆ ಹಲ್ಲೆಗೊಳಗಾದ ವಿನಯ್-ಉಮಾಕಾಂತ್ ಬಗ್ಗೆ ಪ್ರಸ್ತಾಪಿಸಿದ್ದರು.
ಉಮಾಕಾಂತ್'ನನ್ನು ಕೋರಮಂಗಲ ಪೊಲೀಸರು ವಿಚಾರಣೆ ನಡೆಸಿದಾಗ ಎರಡು ಬಾರಿ ಯಡಿಯೂರಪ್ಪನವರ ಡಾಲರ್ಸ್ ಕಾಲೋನಿ ಮನೆಯಲ್ಲಿ ಸಂತೋಷ್'ನನ್ನ ಭೇಟಿಯಾಗಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆ. ಸದ್ಯ ಮಹಾಲಕ್ಷ್ಮೀ ಲೇ ಔಟ್ ಪೊಲೀಸರು ಉಮಾಕಾಂತ್ನನ್ನು ಹೆಚ್ಚಿನ ವಿಚಾರಣೆಗೆ ಠಾಣೆಗೆ ಕರೆದೊಯ್ದಿದ್ದಾರೆ.