ಶವಸಂಸ್ಕಾರಕ್ಕೆ ವಿರೋಧ; ಜಿಲ್ಲಾಧಿಕಾರಿ ಕಚೇರಿ ಮುಂದೆ ಶವವಿಟ್ಟು ಪ್ರತಿಭಟಿಸಿದ ದಲಿತರು
ಚಿಕ್ಕಮಗಳೂರು ತಾಲೂಕಿನ ಗಡಬನಹಳ್ಳಿ ಗ್ರಾಮದ ದಲಿತರಿಗೆ ಶವಸಂಸ್ಕಾರಕ್ಕೆ ಅದೇ ಊರಿನ ಅನ್ಯ ವರ್ಗದ ಜನ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಜನ, ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮೃತ ಹುಚ್ಚಮ್ಮ ಶವವಿಟ್ಟು ಪ್ರತಿಭಟಿಸಿದ್ದಾರೆ.
ಚಿಕ್ಕಮಗಳೂರು (ಜ.16): ಸ್ಮಶಾನ ಜಾಗದಲ್ಲಿ ಶವಸಂಸ್ಕಾರಕ್ಕೆ ಅವಕಾಶ ನೀಡದ ಹಿನ್ನಲೆಯಲ್ಲಿ ಆಕ್ರೋಶಗೊಂಡ ದಲಿತರು ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶವವಿಟ್ಟು ಪ್ರತಿಭಟನೆ ಮಾಡಿದ ಘಟನೆ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಗಡಬನಹಳ್ಳಿ ಗ್ರಾಮದ ದಲಿತರಿಗೆ ಶವಸಂಸ್ಕಾರಕ್ಕೆ ಅದೇ ಊರಿನ ಅನ್ಯ ವರ್ಗದ ಜನ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಜನ, ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮೃತ ಹುಚ್ಚಮ್ಮ ಶವವಿಟ್ಟು ಪ್ರತಿಭಟಿಸಿದ್ದಾರೆ.
ಸರ್ಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿ ಸ್ಮಶಾನ ಜಾಗವನ್ನು ಬಿಟ್ಟು ಕೊಡುವಂತೆ ದಲಿತರು ಒತ್ತಾಯಿಸಿದ್ದಾರೆ.