Asianet Suvarna News Asianet Suvarna News

1 ಎಕರೆಗೆ ಕನಿಷ್ಠ 25 ಸಾವಿರ ರೂ. ಪರಿಹಾರ ಧನ ಬೇಕು: ರೈತರ ಆಗ್ರಹ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ರೈತರ ಋಣ ತೀರಿಸುವುದಿದ್ದರೆ ಕೂಡಲೇ ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌’ಗಳಲ್ಲಿನ ಸಂಪೂರ್ಣ ಸಾಲ ಮನ್ನ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

Farmers demand loan waive off

ಧಾರವಾಡ (ಏ.14): ಸತತ ಬರಗಾಲದಿಂದ ತತ್ತರಿ ಹೋಗಿರುವ ಉತ್ತರ ಕರ್ನಾಟಕದ ರೈತರ ನೆರವಿಗೆ ಸರ್ಕಾರಗಳು ಧಾವಿಸಬೇಕು ಎಂದು ರೈತ ಸಂಘದ ಮುಖಂಡ ಫಕೀರಗೌಡ ಹೂವಣ್ಣವರ್ ಆಗ್ರಹಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ರೈತರ ಋಣ ತೀರಿಸುವುದಿದ್ದರೆ ಕೂಡಲೇ ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌’ಗಳಲ್ಲಿನ ಸಂಪೂರ್ಣ ಸಾಲ ಮನ್ನ ಮಾಡಬೇಕು ಎಂದು ಅವರು ಹೇಳಿದ್ದಾರೆ.

ಇದಲ್ಲದೆ 1 ಎಕರೆಗೆ ಕನಿಷ್ಠ 25 ಸಾವಿರ ರೂಪಾಯಿ ಪರಿಹಾರ ಧನ ವಿತರಿಸಬೇಕೆಂದು ಕೇಂದ್ರ ಮತ್ತು  ಸರ್ಕಾರಗಳಿಗೆ ಮನವಿ ಮಾಡಿಕೊಂಡಿದ್ದಾರೆ.

Follow Us:
Download App:
  • android
  • ios