Asianet Suvarna News Asianet Suvarna News

ಎಂಜಿನಿಯರ್ ಮೇಲೆ ಹಲ್ಲೆಗೆ ಮುಂದಾದ ಕೆ.ಆರ್.ಪೇಟೆ ಶಾಸಕ

ಕಾರ್ಯಪಾಲಕ ಅಭಿಯಂತರ ನಾರಾಯಣ ಮತ್ತು ಶಾಸಕ ನಾರಾಣಯಗೌಡ ನಡುವೆ ಮಾತಿನ ಚಕಮಕಿ | ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆಗೆ ಮುಂದಾದ ಶಾಸಕ ನಾರಾಯಣಗೌಡ

MLA Attempts to Assault Engineer in KR Pet

ಬೆಂಗಳೂರು (ಅ.19): ಕೆ.ಆರ್.ಪೇಟೆ ಹೇಮಾವತಿ ಜಲಾಶಯ ಯೋಜನೆಯ ಕಾರ್ಯಪಾಲಕ ಎಂಜಿನಿಯರ್ ಮೇಲೆ ಶಾಸಕ ನಾರಯಾಣಗೌಡ ಹಲ್ಲೆ ನಡೆಸಿದ್ದಾರೆ.

ನಾಲೆಗಳಿಗೆ ನೀರು ಬಿಡುಗಡೆ ಮಾಡುವಂತೆ ಆಗ್ರಹಿಸಿ ಶಾಸಕ ನಾರಾಯಣಗೌಡ ನೇತೃತ್ವದಲ್ಲಿ ಕಾರ್ಯಪಾಲಕ ಅಭಿಯಂತರರ ಕಛೇರಿಗೆ ಮುತ್ತಿಗೆ ಹಾಕಿದ್ದರು.

ಈ ವೇಳೆ ಕಾರ್ಯಪಾಲಕ ಅಭಿಯಂತರ ನಾರಾಯಣ ಮತ್ತು ಶಾಸಕ ನಾರಾಣಯಗೌಡ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಶಾಸಕ ನಾರಾಯಣಗೌಡ ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.

ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ಶಾಂತಗೊಳಿಸಿದ್ದಾರೆ. ಇಷ್ಟೆಕ್ಕೆ ಸುಮ್ಮನಾಗದ ಶಾಸಕ ನಾರಾಯಣಗೌಡ ಹೇಮಗಿರಿ ನಾಲೆ ಮತ್ತು ಮಂದಗೆರೆ ನಾಲೆಗಳಿಗೆ ನೀರು ಹರಿಸದಿದ್ದರೆ ಕಾರ್ಯಪಾಲಕ ಅಭಿಯಂತರರ ಕಛೇರಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ.

Follow Us:
Download App:
  • android
  • ios