ಪಾರ್ಕ್ ಜಾಗದಲ್ಲಿ ಪೊಲೀಸ್ ಕಮಿಷನರ್ ಕಚೇರಿ!
ನಜರಾಬಾದ್ನಲ್ಲಿ ಕಚೇರಿ ನಿರ್ಮಾಣ ಮಾಡಲು ನಗರಾಭಿವೃದ್ಧಿ ಇಲಾಖೆ ಅನುಮತಿಯನ್ನೂ ಕೊಟ್ಟಿಲ್ಲ. ಆದರೂ ಸಿಎಂ ಸಿದ್ದರಾಮಯ್ಯನವರು ಅಡಿಗಲ್ಲಿಟ್ಟು ಕಚೇರಿ ನಿರ್ಮಾಣಕ್ಕೆ ಮುಂದಾಗಿದ್ದಾರೆ.
ಮೈಸೂರು (ಜ.15): ಮೈಸೂರಲ್ಲಿ ಸಾರ್ವಜನಿಕರ ಉಪಯೋಗಕ್ಕಿದ್ದ ಪಾರ್ಕ್ ಜಾಗದಲ್ಲಿ ಪೊಲೀಸ್ ಕಮೀಷನರ್ ಕಚೇರಿ ತಲೆಎತ್ತುತ್ತಿದ್ದು ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ನಜರಾಬಾದ್ನಲ್ಲಿ ಕಚೇರಿ ನಿರ್ಮಾಣ ಮಾಡಲು ನಗರಾಭಿವೃದ್ಧಿ ಇಲಾಖೆ ಅನುಮತಿಯನ್ನೂ ಕೊಟ್ಟಿಲ್ಲ. ಆದರೂ ಸಿಎಂ ಸಿದ್ದರಾಮಯ್ಯನವರು ಅಡಿಗಲ್ಲಿಟ್ಟು ಕಚೇರಿ ನಿರ್ಮಾಣಕ್ಕೆ ಮುಂದಾಗಿದ್ದಾರೆ.
ಇದು ನಜರಾಬಾದ್ ನಿವಾಸಿಗಳ ವಿರೋಧಕ್ಕೆ ಕಾರಣವಾಗಿದೆ. ಕಾನೂನು ಗಾಳಿಗೆ ತೂರಿ ಪಾರ್ಕ್ ಜಾಗದಲ್ಲಿ ಕಚೇರಿ ನಿರ್ಮಾಣವಾಗುತ್ತಿರುವುದನ್ನು ಪ್ರಶ್ನಿಸಿ ಅಶೋಕ್ ಕುಮಾರ್ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಬಳಿಕ ಹೈಕೋರ್ಟ್ 2016ರ ಅಕ್ಟೋಬರ್ನಲ್ಲಿ ಕಟ್ಟಡ ನಿರ್ಮಾಣಕ್ಕೆ ತಡೆ ನೀಡಿದೆ. ಅದಾಗ್ಯೂ ಕಾಮಗಾರಿ ನಡೆಯುತ್ತಲೇ ಇದೆ ಎಂದು ಸ್ಥಳೀಯರು ದೂರಿದ್ದಾರೆ.