ಆರ್’ಎಸ್ಎಸ್ ಬೈಠಕ್ ಗೆ ಯಡಿಯೂರಪ್ಪ, ಈಶ್ವರಪ್ಪಗಿಲ್ಲ ಆಹ್ವಾನ
ನಾಳೆ ಬೆಂಗಳೂರಿನಲ್ಲಿ ನಡೆಯಲಿರುವ ಆರ್’ಎಸ್ಎಸ್ ಬೈಠಕ್ ಗೆ ಯಡಿಯೂರಪ್ಪ, ಈಶ್ವರಪ್ಪ ಗೆ ಆಹ್ವಾನ ನೀಡಿಲ್ಲ. ರಾಜ್ಯ ಬಿಜೆಪಿ ಪರವಾಗಿ ಸಂಘಟನಾ ಪ್ರಧಾನ ಕಾರ್ಯದರ್ಶಿಗೆ ಮಾತ್ರ ಆಹ್ವಾನ ನೀಡಲಾಗಿದೆ.
ಬೆಂಗಳೂರು (ಜ.16): ನಾಳೆ ಬೆಂಗಳೂರಿನಲ್ಲಿ ನಡೆಯಲಿರುವ ಆರ್’ಎಸ್ಎಸ್ ಬೈಠಕ್ ಗೆ ಯಡಿಯೂರಪ್ಪ, ಈಶ್ವರಪ್ಪ ಗೆ ಆಹ್ವಾನ ನೀಡಿಲ್ಲ. ರಾಜ್ಯ ಬಿಜೆಪಿ ಪರವಾಗಿ ಸಂಘಟನಾ ಪ್ರಧಾನ ಕಾರ್ಯದರ್ಶಿಗೆ ಮಾತ್ರ ಆಹ್ವಾನ ನೀಡಲಾಗಿದೆ.
ದಕ್ಷಿಣ ಭಾರತದ ಪರವಾಗಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಸಂತೋಷ್, ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಗೆ ಮಾತ್ರ ಆಹ್ವಾನ ನೀಡಲಾಗಿದೆ. ಅರುಣ್ ಕುಮಾರ್ ಹಾಗೂ ಸಂತೋಷ್ ಹೊರತುಪಡಿಸಿ ರಾಜ್ಯ ಬಿಜೆಪಿಯ ಯಾವುದೇ ನಾಯಕರು ಅಪೇಕ್ಷಿತರಲ್ಲ. ಪ್ರತಿಬಾರಿ ಸುಮಾರು 12 ಬಿಜೆಪಿ ನಾಯಕರು ಭಾಗವಹಿಸುತ್ತಿದ್ದರು. ಆದರೆ ಈ ಬಾರಿ ಕೇವಲ ಇಬ್ಬರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನ ಗೊಂದಲಗಳ ಹಿನ್ನಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆರ್ ಎಸ್ ಎಸ್ ಹೇಳಿದೆ.