ಬಳ್ಳಾರಿ: ಕುಡಿಯುವ ನೀರಿಗಾಗಿ ಮಹಾನಗರಪಾಲಿಕೆಗೆ ಮುತ್ತಿಗೆ
ಬಳ್ಳಾರಿ ಮಹಾನಗರಪಾಲಿಕೆಗೆ ಮುತ್ತಿಗೆ ಹಾಕಿದ ಪ್ರತಿಭಟನಕಾರರು ಖಾಲಿ ಕೊಡವನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.
ಬಳ್ಳಾರಿ (ಏ.14): ಬಳ್ಳಾರಿ ಮಹಾನಗರ ಪಾಲಿಕೆ ಸಾರ್ವಜನಿಕರಿಗೆ ನೀರು ಪೂರೈಕೆ ಮಾಡುವಲ್ಲಿ ವಿಫಲಗೊಂಡಿದೆ ಎಂದು ಆರೋಪಿಸಿ ಬಳ್ಳಾರಿ ನಾಗರಿಕ ಹೋರಾಟ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.
ಬಳ್ಳಾರಿ ಮಹಾನಗರಪಾಲಿಕೆಗೆ ಮುತ್ತಿಗೆ ಹಾಕಿದ ಪ್ರತಿಭಟನಕಾರರು ಖಾಲಿ ಕೊಡವನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.
ತುಂಗಭದ್ರ ಜಲಾಶಯ ಪಕ್ಕದಲ್ಲಿದ್ದರೂ, ಅಲ್ಲಿಂದ ನೀರು ಸಂಗ್ರಹಿಸಿ ಸರಬರಾಜು ಮಾಡುವಲ್ಲಿ ವಿಫಲವಾಗಿದೆ. ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಸಮರ್ಪಕವಾಗಿ ನೀರು ಸರಬರಾಜು ಪೂರೈಕೆಗೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.