ಬೆಂಗಳೂರು-ಹಾಸನ ರೈಲು ಮಾರ್ಗ ಚಾಲನೆಗೆ ಯಮಗಂಡ ಕಾಲ ಅಡ್ಡಿ!
ಉದ್ಘಾಟನಾ ಕಾರ್ಯಕ್ರಮ 12.30ಕ್ಕೆ ನಿಗದಿಯಾಗಿತ್ತು. ಆದರೆ ಆ ಸಮಯದಲ್ಲಿ ಯಮಗಂಡಕಾಲ ಆರಂಭವಾಗುತ್ತದೆ. ಈ ವೇಳೆಯಲ್ಲಿ ಸಮಾರಂಭ ಆರಂಭಿಸದೆ 10.30 ಕ್ಕೆ ಕಾರ್ಯಕ್ರಮ ಆರಂಭಿಸುವಂತೆ ರೇವಣ್ಣ ಪಟ್ಟು ಹಿಡಿದರು.
ಬೆಂಗಳೂರು(ಮಾ.26): ಬೆಂಗಳೂರು-ಹಾಸನ ರೈಲು ಮಾರ್ಗ ಚಾಲನೆಗೆ ಯಮಗಂಡ ಕಾಲ ಅಡ್ಡಿಯಾಗಿದೆ. ಯಮಗಂಡ ಕಾಲದಲ್ಲಿ ಯೋಜನೆಗೆ ಚಾಲನೆ ಸಿಗದಂತೆ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಪಟ್ಟು ಹಿಡಿದ ಕಾರಣ ಒಂದು ಗಂಟೆ ಮುಂಚಿತವಾಗಿ ಕಾರ್ಯಕ್ರಮ ಆರಂಭವಾಗಲಿದೆ.
ಉದ್ಘಾಟನಾ ಕಾರ್ಯಕ್ರಮ 12.30ಕ್ಕೆ ನಿಗದಿಯಾಗಿತ್ತು. ಆದರೆ ಆ ಸಮಯದಲ್ಲಿ ಯಮಗಂಡಕಾಲ ಆರಂಭವಾಗುತ್ತದೆ. ಈ ವೇಳೆಯಲ್ಲಿ ಸಮಾರಂಭ ಆರಂಭಿಸದೆ 10.30 ಕ್ಕೆ ಕಾರ್ಯಕ್ರಮ ಆರಂಭಿಸುವಂತೆ ರೇವಣ್ಣ ಪಟ್ಟು ಹಿಡಿದರು. ಜೆಡಿಎಸ್ ನಾಯಕನ ಮಾತಿನಿಂದ ಕೆಲ ಕಾಲ ರೈಲ್ವೇ ಅಧಿಕಾರಿಗಳು ಕಂಗಾಲಾದರು ಅಂತಿಮವಾಗಿ ಮಾಜಿ ಪ್ರಧಾನಿ ದೇವೇಗೌಡ ಅವರು ಮಧ್ಯಪ್ರವೇಶದಿಂದ ಸಮಸ್ಯೆ ಪರಿಹಾರವಾಗಿ ಕಾರ್ಯಕ್ರಮವನ್ನು 11.30ಕ್ಕೆ ಬದಲಾವಣೆ ಮಾಡಲಾಯಿತು.