Asianet Suvarna News Asianet Suvarna News

ಹೆಲಿಕಾಪ್ಟರ್​ನಿಂದ ಹಾರುವ ಮುನ್ನ ಖಳನಟ ಉದಯ್ ಕೊನೆಯದಾಗಿ ಸುವರ್ಣ ನ್ಯೂಸ್'ಗೆ ಹೇಳಿದ್ದು...!

ಈ ಶೂಟಿಂಗ್'ಗೆ ಹೊರಡುವ ಮುನ್ನ ಉದಯ್ ಸುವರ್ಣ ನ್ಯೂಸ್'ನೊಂದಿಗೆ ಮಾತನಾಡಿದ್ದು, ದೇವರ ಮೇಲೆ ಭಾರ ಹಾಕಿ ಈ ಪ್ರಯತ್ನಕ್ಕೆ ಕೈ ಹಾಕುತ್ತಿರುವುದಾಗಿ ಹೇಳಿಕೆ ನೀಡಿದ್ದಾರೆ. 

Uday last words

ಬೆಂಗಳೂರು(ನ.07): ಒಂದು ಪ್ಲೋರ್ ಮೇಲಿನಿಂದ ಕೆಳಗೆ ಬಗ್ಗಿ ನೋಡಿದರೆ ನನಗೆ ತಲೆ ಸುತ್ತವಂತೆ ಆಗುತ್ತದೆ ಎನ್ನುವ ಖಳನಟ ಉದಯ್ ಇಂದು ಮಾಸ್ತಿಗುಡಿ ಸಿನಿಮಾ ಕ್ಲೈಮ್ಯಾಕ್ಸ್​ ಶೂಟಿಂಗ್ ವೇಳೆ ಜಲಾಶಯಕ್ಕೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. 

ಈ ಶೂಟಿಂಗ್'ಗೆ ಹೊರಡುವ ಮುನ್ನ ಉದಯ್ ಸುವರ್ಣ ನ್ಯೂಸ್'ನೊಂದಿಗೆ ಮಾತನಾಡಿದ್ದು, ದೇವರ ಮೇಲೆ ಭಾರ ಹಾಕಿ ಈ ಪ್ರಯತ್ನಕ್ಕೆ ಕೈ ಹಾಕುತ್ತಿರುವುದಾಗಿ ಹೇಳಿಕೆ ನೀಡಿದ್ದಾರೆ. 

ಮೊದಲ ಬಾರಿಗೆ ಎತ್ತರದಿಂದ ಹಾರುತ್ತಿದ್ದೇನೆ, ಹೆಲಿಕಾಪ್ಟರ್​ ಹತ್ತುತ್ತಿರುವುದು ಇದೇ ಮೊದಲು ಎಂದು ಮಾತನಾಡಿದ ಉದಯ್, ದೇವರ ಮೇಲೆ ಭಾರ ಹಾಕಿ ಕೆಳಗೆ ಹಾರುತ್ತೇನೆ ಎಂದಿದ್ದಾರೆ, 


ಮಾಸ್ತಿಗುಡಿ ಸಿನಿಮಾ ಕ್ಲೈಮ್ಯಾಕ್ಸ್​ ಶೂಟಿಂಗ್ ವೇಳೆ  100 ಅಡಿ ಎತ್ತರದಿಂದ ಹೆಲಿಕಾಪ್ಟರ್​ನಿಂದ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ನಾಯಕ ನಟ ದುನಿಯಾ ವಿಜಯ್ ಹಾಗೂ ಸಹ ನಟ ಅನಿಲ್'ನಿಂದಿಗೆ ಉದಯ್ ಹಾರಿದ್ದರು, ದುನಿಯಾ ವಿಜಯ್ ಈಜಿ ದಡ ಸೇರಿದರೆ ಉದಯ್​, ಅನಿಲ್ ಸಾವನ್ನಪ್ಪಿದ್ದಾರೆ. 

Follow Us:
Download App:
  • android
  • ios