Asianet Suvarna News Asianet Suvarna News

ಲೋಕಸಭಾ ಚುನಾವಣೆ ಬಳಿಕ ಸಿಎಂ ಆಗ್ತಾರ ಡಿಕೆಶಿ? ಕಾಂಗ್ರೆಸ್ ನಾಯಕರ ಮಾತಿನಲ್ಲೇ ಸುಳಿವು!

ಲೋಕಸಭೆ ಚುನಾವಣೆ ಬಳಿಕ ಸಿಎಂ ಬದಲಾವಣೆ?, ಕಾಂಗ್ರೆಸ್ ವಿರುದ್ಧ ದೇವೇಗೌಡರ ವಾಗ್ದಾಳಿ, ತಿರುಗೇಟು ನೀಡಿದ ಡಿಕೆಶಿ, ಎಬಿಪಿ ಸಿವೋಟರ್ ಸಮೀಕ್ಷೆ ಬಹಿರಂಗ, ಯಾರಿಗೆ ಮತ?11 ವರ್ಷದ ಸೇಡು, ಭಾರತೀಯ ಸರಬ್ಜಿತ್ ಸಿಂಗ್ ಕೊಂದ ಉಗ್ರ ಪಾಕಿಸ್ತಾನದಲ್ಲಿ ಬೀದಿ ಹೆಣ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಲೋಕಸಭೆ ಚುನಾವಣೆ ಬಳಿಕ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುತ್ತಾ? ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೀಡುತ್ತಿರುವ ಹೇಳಿಕೆ ಈ ಚರ್ಚೆಗೆ ಮತ್ತಷ್ಟು ಬಲ ನೀಡಿದೆ. ಮೈಸೂರು ಹಾಗೂ ಚಾಮರಾಜನಗರ ಸವಾಲನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿಎಂ ಸಿದ್ದರಾಮಯ್ಯ ಬರೋಬ್ಬರಿ 9 ದಿನ ಈ ಕ್ಷೇತ್ರದಲ್ಲಿ ಕಳೆದಿದ್ದಾರೆ. ನಾನು ಬೇಕೋ ಬೇಡ್ವೋ ಎಂದು ಭಾಷಣದಲ್ಲಿ ಸಿದ್ದರಾಮಯ್ಯ ಜನರನ್ನು ಕೇಳುತ್ತಿದ್ದಾರೆ.  ಇತ್ತ ದೆಹಲಿಯಲ್ಲಿ ಎಲ್ಲಾ ನಿರ್ಧಾರವಾಗಿದೆ. ನೀವು ತಲೆಕೆಡಿಸಿಕೊಳ್ಳಬೇಡಿ, ದಿಲ್ಲಿಯಲ್ಲಿ ಎಲ್ಲಾ ತೀರ್ಮಾನ ಆಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. 

Video Top Stories