Asianet Suvarna News Asianet Suvarna News

ಶೋಷಿತ ವರ್ಗದ ದನಿಯಾಗಿದ್ದರು, ಯಾವುದೇ ಕಪ್ಪು ಚುಕ್ಕೆ ಇಲ್ಲದೆ ರಾಜಕೀಯ: ಜಿ ಟಿ ದೇವೇಗೌಡ

ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಜೆಡಿಎಸ್‌ ಮುಖಂಡ ಜಿ ಟಿ ದೇವೇಗೌಡ ಅವರು ಕಂಬನಿ ಮಿಡಿದಿದ್ದಾರೆ. ಪ್ರಸಾದ್‌ ಅವರು ಶೋಷಿತ ವರ್ಗದ ದನಿಯಾಗಿದ್ದರು, ಯಾವುದೇ ಕಪ್ಪು ಚುಕ್ಕೆ ಇಲ್ಲದೆ ರಾಜಕೀಯ ಮಾಡಿದ್ದವರು ಎಂದಿದ್ದಾರೆ. 

ವಿ ಶ್ರೀನಿವಾಸ ಪ್ರಸಾದ್ (V Srinivasa Prasad) ಅಗಲಿಕೆ ಹಿನ್ನೆಲೆ ರಾಜಕೀಯ ಗಣ್ಯರು ಇವರ  ಜೊತೆಗೆ ಇದ್ದ ಒಡನಾಟವನ್ನು ಸ್ಮರಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಜೆಡಿಎಸ್‌ ಮುಖಂಡ ಜಿ ಟಿ ದೇವೇಗೌಡ (GT DeveGowda) ಕಂಬನಿ ಮಿಡಿದಿದ್ದು, ಅವರು ಶೋಷಿತ ವರ್ಗದ ದನಿಯಾಗಿದ್ದರು, ಯಾವುದೇ ಕಪ್ಪು ಚುಕ್ಕೆ ಇಲ್ಲದೆ ರಾಜಕೀಯ ಮಾಡಿದ್ದವರು, ಸರಳ, ಆದರ್ಶ ವ್ಯಕ್ತಿಯಾಗಿ ರಾಜಕೀಯ ಮಾಡಿದ ರಾಜಕಾರಣಿ ಎಂದು ಮೈಸೂರಲ್ಲಿ ಜಿ.ಟಿ ದೇವೇಗೌಡ ಹೇಳಿಕೆ ನೀಡಿದ್ದಾರೆ. ಅದರಲ್ಲೂ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ರಾಜಕೀಯ ನಿವೃತ್ತಿ ಹೊಂದಿದ್ದ ಅವರು ಸರಳ ಹಾಗೂ ಆದರ್ಶ ವ್ಯಕ್ತಿಯಾಗಿ ರಾಜಕೀಯ ಮಾಡಿದ್ದರು ಎಂದು ಸ್ಮರಿಸಿಕೊಂಡಿದ್ದಾರೆ.

ಇದನ್ನೂ ವೀಕ್ಷಿಸಿ:  Prajwal Revanna Sex Scandal: ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿದೇಶಕ್ಕೆ ತೆರಳಿದ್ರಾ ಪ್ರಜ್ವಲ್ ರೇವಣ್ಣ?